ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಚಾಲೆಂಜಿAಗ್ ಸ್ಟಾರ್ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತಶೆಟ್ಟಿ ಅವರು, ನಟ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ, ನಾಗರಾಜು, ಲಕ್ಷ್ಮಣ, ಜಗದೀಶ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ ೧೧ ರಂದು ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಇದೀಗ ಅವರಿಗೆ ಪೂರ್ಣಪ್ರಮಾಣದ ಜಾಮೀನು ಸಿಕ್ಕಿದೆ.
ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ದರ್ಶನ್ ಅವರದ್ದು ರೇಣುಕಾ ಸ್ವಾಮಿ ಕೊಲೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಿದ್ದರು. ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಈ ಹಿಂದೆಯೇ ಜಾಮೀನು ದೊರೆತಿತ್ತು, ಇಂದು ಏಳು ಮಂದಿಗೆ ಜಾಮೀನು ದೊರೆತಿದೆ. ಆ ಮೂಲಕ ಈ ಪ್ರಕರಣದ ೧೧ ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ.
ಅನಾರೋಗ್ಯದ ಕಾರಣ ನೀಡಿ ಈಗಾಗಲೇ ಮಧ್ಯಂತರ ಜಾಮೀನನ್ನ ದರ್ಶನ್ ಪಡೆದಿದ್ದಾರೆ. ಇನ್ನು ಇಂದು ಜಾಮೀನು ಪಡೆದ ಪ್ರಕರಣದ ಇತರೆ ಆರೋಪಿಗಳು ಸೋಮವಾರ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಪವಿತ್ರಾ ಗೌಡ ಸಹ ಸೋಮವಾರವೇ ಜೈಲಿನಿಂದ ಹೊರಬರಲಿದ್ದಾರೆ.
More Stories
ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ ಆಪರೇಷನ್ ಸಕ್ಸಸ್
ಮೈಸೂರಿನ ಫಾರಂಹೌಸ್ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಶ್ರಾಂತಿ