ಗದಗ: ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ ವಿರುದ್ಧ ನೀಡಿರುವ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ವಿರೋಧಿ ಕೇಂದ್ರ ಸಚಿವ ಅಮಿತ್ ಶಾ ಬ್ಯಾನರ್ ಪ್ರದರ್ಶಿಸಿ ಘೋಷಣೆ ಕೂಗಿದರಲ್ಲದೇ, ಸಂವಿಧಾನ ವಿರೋಧಿ ಅಮಿತ್ ಶಾ ಅವರನ್ನು ಕೂಡಲೇ ಸಂಪುಟದಿAದ ಕೈಬಿಡಬೇಕು ಎಂದು ಆಗ್ರಹಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಹ ಅಮಿತ್ ಶಾ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವುದು ಸರಿಯಲ್ಲ. ಸಂವಿಧಾನದ ತಳಹದಿಯಲ್ಲಿಯೇ ಕೇಂದ್ರ ಸರ್ಕಾರ ನಡೆಯುತಿರುವುದು ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘಟನೆಯ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

More Stories
ಸರ್ಕಾರಿ ದುಡ್ಡಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸುವುದು ಎಷ್ಟು ಸರಿ: ಬಸವರಾಜ ಬೊಮ್ಮಾಯಿ
ಸ್ವಾತಂತ್ರ್ಯ ಯೋಧರ ಮನೆಗಳಿಗೆ ತೆರಳಿ ಆಹ್ವಾನ ನೀಡಿದ ಸಚಿವ ಎಚ್.ಕೆ.ಪಾಟೀಲ
ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ನೈತಿಕತೆ ಕುಸಿಯುವಂತೆ ಮಾಡಿದೆ: ಬಸವರಾಜ ಬೊಮ್ಮಾಯಿ